Connect with us

Hi, what are you looking for?

Diksoochi News

ರಾಜ್ಯ

ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಆರೆಂಜ್ ಅಲರ್ಟ್

0

ರಾಜ್ಯದ 7 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಣೆಮಾಡಲಾಗಿದೆ.

ಜುಲೈ 10 ರಂದು ರಾಜ್ಯಕ್ಕೆ ನೈರುತ್ಯ ಮುಂಗಾರುವಿನ ಬಾರೀ ಮಳೆಯ ಸೂಚನೆ ಇದೆ ಎಂದು ಹವಾಮಾನ ಇಲಾಖೆ ಈ ಮೊದಲೇ ಸೂಚನೆ ನೀಡಿತ್ತು.

ಗುರುವಾರ ರಾತ್ರಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಭಾಗಳಲ್ಲಿ ಉತ್ತಮ ಮಳೆಯಾಗಿದೆ.ಅದಲ್ಲದೆ ಮುಂದಿನ ನಾಲ್ಕೈದು ದಿನಗಳ ಕಾಲ ಭಾರೀ ಮಳೆಯ ನಿರೀಕ್ಷೆ ಇದೆ. ಮಲೆನಾಡು ಹಾಗೂ ಪಶ್ಚಿಮಘಟ್ಟಗಳನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆಯಾಗಿದೆ.

Advertisement. Scroll to continue reading.

ರಾಜ್ಯಕ್ಕೆ ಮುಂಗಾರುವಿನ ಪ್ರವೇಶವಾಗಿ ಒಂದು ತಿಂಗಳಾಗಿದ್ದರೂ ಕೂಡ ಇಲ್ಲಿಯವರೆಗೆ ಉತ್ತಮ ಮಳೆಯಾಗಿರಲಿಲ್ಲ . ರಾಜ್ಯದ ಮುಂದಿನ ಮುರ್ನಾಲ್ಕು ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷಿಸಲಾಗಿದೆ.

ಆರೆಂಜ್ ಅಲರ್ಟ್ ಘೋಷಣೆ

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿತ್ರದುರ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಕೊಪ್ಪಳ, ಚಾಮರಾಜನಗರ, ಮಂಡ್ಯ,ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!