Connect with us

Hi, what are you looking for?

Diksoochi News

ಕರಾವಳಿ

ಹಿರಿಯ ಯಕ್ಷಗಾನ ಕಲಾವಿದ, ಭಾಗವತ ಮತ್ಯಾಡಿ ನರಸಿಂಹ ಶೆಟ್ಟಿ ಇನ್ನಿಲ್ಲ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಬಡಗುತಿಟ್ಟು ಯಕ್ಷರಂಗದ ಹಿರಿಯ ಭಾಗವತ ಕಲಾವಿದ ಮತ್ಯಾಡಿ ನರಸಿಂಹ ಶೆಟ್ಟಿ(94) ಅವರು ಇಂದು ನಿಧನರಾಗಿದ್ದಾರೆ. ಮಂದಾರ್ತಿ ಮೇಳದಲ್ಲಿ ದೀರ್ಘಕಾಲ ಸೇವೆಗೈದಿರುವ ಅವರು ಕೊಡವೂರು, ಪೆರ್ಡೂರು, ಅಮೃತೇಶ್ವರೀ, ಮಂದಾರ್ತಿ, ಮಾರಣಕಟ್ಟೆ ಹಾಗೂ ಕಳುವಾಡಿ ಮೇಳಗಳಲ್ಲಿ ಒಟ್ಟು ಸುಮಾರು 45 ವರ್ಷಕ್ಕೂ ಹೆಚ್ಚು ವರ್ಷಗಳ ಕಾಲ ಯಕ್ಷಗಾನ ಭಾಗವತರಾಗಿ ಜನಾನುರಾಗಿಯಾಗಿದ್ದರು.

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಇವರಿಗೆ ಸಂದಿವೆ. ಯಕ್ಷಗಾನ ಕಲಾರಂಗವು ಭಾಗವತ ನಾರ್ಣಪ್ಪ ಉಪ್ಪೂರರ ಸ್ಮರಣಾರ್ಥ ಪ್ರಥಮ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಮೃತರು ಮೂರು ಹೆಣ್ಣು ಹಾಗೂ ಓರ್ವ ಪುತ್ರರನ್ನು ಅಗಲಿದ್ದಾರೆ. ಹಲವಾರು ಗಣ್ಯರು, ಅಭಿಮಾನಿಗಳು ನರಸಿಂಹ ಶೆಟ್ಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!