ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಪಶ್ಚಿಮ ಮತ್ತು ಕೇಂದ್ರ ಪ್ರದೇಶದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗುವ ಹಿನ್ನಲೆ ಉಡುಪಿ,ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯದ ಮಲೆನಾಡು – ಪಶ್ಚಿಮ ಘಟ್ಟಗಳನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆಯಾಗಿದೆ
ನೈರುತ್ಯ ಮುಂಗಾರು ಮತ್ತೆ ಮಳೆ ತರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದಿನಿಂದ ಜು.14 ರವರೆಗೆ ರಾಜ್ಯ ಮಾತ್ರವಲ್ಲದೇ ನೆರೆಯ ರಾಜ್ಯಗಳಾದ ಗೋವಾ, ಮತ್ತು , ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣ,ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಭಾರೀ ಮಳೆ ಯಾಗಲಿದೆ.

ರೆಡ್ ಅಲರ್ಟ್ :
ಉಡುಪಿ,ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಂದು ಘೋಷಿಸಲಾಗಿದೆ. ಮೈಸೂರು,ಹಾವೇರಿ, ದಾವಣಗೆರೆ, ಬೆಳಗಾವಿ,ವಿಜಯಪುರ, ಚಿತ್ರದುರ್ಗ, ಯಾದಗಿರಿ,ಧಾರವಾಡ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಂದು ಘೋಷಿಸಲಾಗಿದೆ.

