Connect with us

Hi, what are you looking for?

Diksoochi News

ಕರಾವಳಿ

ಬೈಂದೂರಿನಲ್ಲಿ ಮಲಬಾರ್ ಗೋಲ್ಡ್ ಸಂಸ್ಥೆಯಿಂದ ಕಿಟ್ ವಿತರಣೆ

0

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗಾನಾಡು ಗ್ರಾಮದ ಹಿಂದುಳಿದ ವರ್ಗದ ಬಡ ಕುಟುಂಬಗಳಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ 100 ರೇಷನ್ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ಕ್ರಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷರಾದ ವೆಂಕಟ ಪೂಜಾರಿ ಸಸಿಹಿತ್ಲು ಸಾಂಕೇತಿಕವಾಗಿ ವಿತರಣೆ ಮಾಡಿದರು. ಈ ವೇಳೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಇವರಿಗೆ ಶಾಲು ಹೊದಿಸಿ ಗೌರವಿಸಿ, ಕೊರೊನ ಸಮಯದಲ್ಲಿ ಗ್ರಾಮೀಣ ಪ್ರದೇಶದ ಜನರ ಮೇಲೆ ಕಾಳಜಿಯಿಟ್ಟು ಫುಡ್ ನೀಡಿದ ಮಲಬಾರ್ ಗೋಲ್ಡ್ ಸಂಸ್ಥೆಯ ಸಾಮಾಜಿಕ ಕಳಕಳಿ ಹಾಗೂ ಬಡವರಿಗೆ ನೀಡುವ ಸೌಲಭ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಮಯದಲ್ಲಿ ಉಡುಪಿ ಮಲಬಾರ್ ಗೋಲ್ಡ್ ಸಂಸ್ಥೆಯ ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ, ತಸ್ಲಿಮ್, ನದೀಮ್, ದೇವದಾಸ್ ನಾಗೂರು, ಸ್ಥಳೀಯರಾದ ಹೆರಿಯ ದೇವಾಡಿಗ, ಸುಧಾಕರ್ ಮೋಗವೀರ, ಹರೀಶ್ ಜಟ್ಟಿತ್ಲು, ರಾಘವೇಂದ್ರ ಮೋಗವೀರ ಸಸಿಹಿತ್ಲು ಮತ್ತಿತ್ತರರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!