Connect with us

Hi, what are you looking for?

Diksoochi News

ರಾಷ್ಟ್ರೀಯ

ವಾಚ್‌ಟವರ್‌ನಲ್ಲಿ ಸೆಲ್ಫಿ ತೆಗಿಯುತ್ತಿರುವಾಗ ಸಿಡಿಲು ಬಡಿದು 11 ಮಂದಿ ಸಾವು

0

ಜೈಪುರ : ವಾಚ್‌ಟವರ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿರುವ ವೇಳೆ ಸಿಡಿಲು ಬಡಿದು 11 ಮಂದಿ ಮೃತಪಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ಜೈಪುರದಲ್ಲಿ ನಡೆದಿದೆ.

ಜೈಪುರದ ಪ್ರಸಿದ್ಧ ಅಮರ್ ಅರಮನೆಯ ಎದುರು ಇರುವ ವಾಚ್‌ಟವರ್‌ಗೆ ಸಿಡಿಲು ಬಡಿದಿದ್ದು, ಕೆಲವರು ಭಯದಿಂದ ಟವರ್‌ನಿಂದ ಕೆಳಗೆ ಜಿಗಿದು ಗಾಯಗೊಂಡಿದ್ದಾರೆ.

ಭಾನುವಾರ ರಾಜಸ್ಥಾನದಲ್ಲಿ ಭಾರಿ ಮಳೆಯಾಗಿತ್ತು, ಇಂತಹ ಸಂದರ್ಭದಲ್ಲಿ ಜನರು ವಾಚ್ ಟವರ್ ಹತ್ತಿ ಸೆಲ್ಫಿ ತೆಗೆದುಕೊಳ್ಳುವುದರಲ್ಲಿ ತಲ್ಲೀನರಾಗಿದ್ದರು. ಈ ಸಂದರ್ಭದಲ್ಲಿ 27 ಮಂದಿ ವಾಚ್‌ಟವರ್‌ನಲ್ಲಿ ಇದ್ದರು ಎನ್ನಲಾಗಿದೆ.

Advertisement. Scroll to continue reading.

ಸಿಡಿಲು ಬಡಿದು ಮೃತಪಟ್ಟಿರುವ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವಂತೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!