Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಅಪಾರ್ಟ್ಮೆಂಟ್ ವೊಂದರಲ್ಲಿ ಮಹಿಳೆಯ ಬರ್ಬರ ಹತ್ಯೆ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಕುಮ್ರಗೋಡಿನ ಅಪಾರ್ಟ್ಮೆಂಟ್ ವೊಂದರಲ್ಲಿ ಮಹಿಳೆಯ ಬರ್ಬರವಾಗಿ ಕೊಲೆಗೈದ ಘಟನೆ ನಡೆದಿದೆ ನಿನ್ನೆ ಸಂಜೆ ವೇಳೆ ನಡೆದಿದೆ. ಗಂಗೊಳ್ಳಿ ಮೂಲದ ವಿಶಾಲ ಗಾಣಿಗ(35) ಕೊಲೆಯಾದ ಮಹಿಳೆ.

ಗಂಡನೊಂದಿಗೆ ವಿದೇಶದಲ್ಲಿ ವಾಸವಾಗಿದ್ದ ವಿಶಾಲ ಕೆಲವು ದಿನಗಳ ಹಿಂದೆಯಷ್ಟೇ ಊರಿಗೆ ಮರಳಿದ್ದರು. ತಂದೆ ಹಾಗೂ ಮಗಳ ಜೊತೆ ತನ್ನ ಗಂಗೊಳ್ಳಿಯ ಮನೆಗೆ ಹೋಗಿದ್ದು, ತನಗೆ ಬ್ಯಾಂಕ್ ನಲ್ಲಿ ಕೆಲಸವಿದೆ ಎಂದು ಬ್ರಹ್ಮಾವರಕ್ಕೆ ವಾಪಸಾಗಿದ್ದರು. ಕೆಲಸ ಮುಗಿಸಿ ಗಂಗೊಳ್ಳಿ ಮನೆಗೆ ಬರುವೆ ಎಂದು ತಿಳಿಸಿದರು. ಸಂಜೆಯಾದರೂ ಮಗಳು ಮನೆಗೆ ಬಾರದ ಕಾರಣ ಹಾಗೂ ಪೋನ್ ಕೂಡ ರಿಸೀವ್ ಮಾಡದಿರುವುದರಿಂದ ಗಾಬರಿಗೊಂಡು ತನ್ನ ಇನ್ನೋರ್ವ ಮಗಳೊಂದಿಗೆ ವಿಶಾಲ ಅವರನ್ನು ಹುಡುಕಿಕೊಂಡು ಬ್ರಹ್ಮಾವರಕ್ಕೆ ಮನೆಯವರು ಬಂದಿದ್ದಾರೆ.

Advertisement. Scroll to continue reading.

ಈ ಸಂದರ್ಭದಲ್ಲಿ ಮಗಳು ಅಪಾರ್ಟ್ಮೆಂಟ್ ನ ರೂಮ್ ವೊಂದರಲ್ಲಿ ಕುತ್ತಿಗೆಗೆ ವಯರ್ ಬಿಗಿದ ಸ್ಥಿತಿಯಲ್ಲಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಈ ಕೊಲೆ ಪ್ರಕರಣವು ಚಿನ್ನಾಭರಣಕ್ಕಾಗಿ ನಡೆದಿರುವುದಾಗಿ ಶಂಕೆ ವ್ಯಕ್ತಪಡಿಸಲಾಗಿದೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!