ಉಡುಪಿ : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಸಂಬದಿಸಿದಂತೆ ಉಡುಪಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಜೀವಾವಧಿ ತೀರ್ಪನ್ನು ನೀಡಿತ್ತು. ಜೀವಾವಧಿ ಶಿಕ್ಷೆಗೆ ಗುರಿಯಾಗಿ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ಹಾಗೂ ನವನೀತ ಶೆಟ್ಟಿ ಮೇಲ್ಮನವಿ ಹಾಗೂ ಜಾಮೀನು ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದಾರೆ. ಪ್ರಕರಣದ ಇನೊಬ್ಬ ಆರೋಪಿ ನಿರಂಜನ ಭಟ್ ಅರ್ಜಿಯನ್ನು ಸಲ್ಲಿಸಿಲ್ಲ.
2016 ರಲ್ಲಿ ನಡೆದ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿ ಜಿಲ್ಲಾ ನ್ಯಾಯಲಾಯ ಜೂನ್ 8(2021) ರಂದು 3 ಪ್ರಮುಖ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ನವನೀತ ಶೆಟ್ಟಿ, ನಿರಂಜನ ಭಟ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಶಿಕ್ಷೆಯ ಅನುಸಾರ 3 ಆರೋಪಿಗಳನ್ನು ಬೆಂಗಳೂರಿನಲ್ಲಿರುವ ಪರಪ್ಪನ ಅಗ್ರಹಾರ ಜೈಲೂ ಪಾಲಾಗಿದ್ದಾರೆ.
ತೀರ್ಪಿನ ವಿರುದ್ಧ ಜ.5 ರಂದು ರಾಜೇಶ್ವರಿ ಶೆಟ್ಟಿ ಹಾಗೂ
ಜು.7 ರಂದು ನವನೀತ ಶೆಟ್ಟಿ ಮತ್ತೆ ಜಾಮೀನು ನೀಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
Advertisement. Scroll to continue reading.

In this article:Bhaskar Shetty Murder, Diksoochi news, diksoochi Tv, diksoochi udupi

Click to comment