Connect with us

Hi, what are you looking for?

Diksoochi News

ರಾಜ್ಯ

ಮುಂದಿನ ನಾಲ್ಕು ದಿನ ಮುಂದುವರೆಯಲಿದೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

0

ಬೆಂಗಳೂರು : ಈಗಾಗಲೃಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಕಡೆ ಭಾರೀ ಮಳೆಯಾಗಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.

ಮಳೆಯ ಆರ್ಭಟ; ಹಾನಿ:

ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗಿನಲ್ಲಿ ಭೂಕುಸಿತದ ಉಂಟಾಗಿದ್ದು, ಚಿಕ್ಕಮಗಳೂರಲ್ಲಿ ರಸ್ತೆ ಬಿರುಕು ಬಿಟ್ಟು ಆತಂಕ ಸೃಷ್ಟಿಯಾಗಿದೆ. ಗೋಕರ್ಣದ ಆತ್ಮಲಿಂಗಕ್ಕೆ ನೀರು ನುಗ್ಗಿ 2 ಗಂಟೆಕಾಲ ಪೂಜೆ ಸ್ಥಗಿತಗೊಳಿಸಲಾಯಿತು.

Advertisement. Scroll to continue reading.

ದಿನವಿಡೀ ಸುರಿದ ಧಾರಾಕಾರ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಇನ್ನೂ ಉಡುಪಿಯಲ್ಲೂ ಕೂಡ ಉತ್ತಮ ಮಳೆಯಾಗೂತ್ತಿದ್ದು, ಶುಕ್ರವಾರ ರೆಡ್‌ ಅಲರ್ಟ್‌ ಎಂದು ಘೋಷಿಸಲಾಗಿದೆ.

ಕೊಡಗಿನಲ್ಲಿ ಭಾರೀ ಗಾಳಿ ಮಳೆಗೆ ಮಡಿಕೇರಿ ಜಿಲ್ಲಾಡಳಿತ ಕಚೇರಿ ಬಳಿ ಮಣ್ಣು ಕುಸಿತ ಉಂಟಾಗಿದೆ.ಮೇಲ್ಭಾಗದಿಂದ ಮಣ್ಣು ಕೊಚ್ಚಿಹೋಗುತ್ತಿದ್ದು, ಮಣ್ಣು ಕುಸಿತ ಮುಂದುವರಿದಲ್ಲಿ ಜಿಲ್ಲಾಧಿಕಾರಿ ಕಚೇರಿ ಕಟ್ಟಡಕ್ಕೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಮಂಗಳೂರು-ಮಡಿಕೇರಿ ಹೆದ್ದಾರಿ ರಸ್ತೆ ಕೂಡ ಬಂದ್‌ ಆಗುವ ಸಾಧ್ಯತೆ ಎದುರಾಗಿದೆ. ಹಲವೆಡೆ ಮರ ಬಿದ್ದು ರಸ್ತೆ ಸಂಚಾರ ಹಾಗೂ ವಿದ್ಯುತ್‌ ಕಡಿತಗೊಂಡಿದೆ.

ಚಿಕ್ಕಮಗಳೂರಲ್ಲಿ ತುಂಗಾ ಸೇರಿದಂತೆ ಹಲವು ನದಿಗಳ ನೀರಿನಮಟ್ಟ ಏರಿಕೆಯಾಗಿದ್ದು. ಹೊನ್ನಾಳ ಚೆಕ್‌ಪೋಸ್ಟ್‌ ಬಳಿ ಚಿಕ್ಕಮಗಳೂರು-ಮುತ್ತೋಡು ಸಂಪರ್ಕ ರಸ್ತೆ ಕುಸಿದಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ. ತುಂಗಾ ನದಿ ಉಕ್ಕಿಹರಿಯುತ್ತಿರುವುದರಿಂದ ಕಳಸಾ-ಹೊಸನಾಡು ರಸ್ತೆ ಸೇತುವೆ ಮುಳುಗಡೆಯಾಗುವ ಆತಂಕ ಎದುರಾಗಿದೆ. ಕಳಸ, ಕುದುರೆಮುಖ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಸಿರಿವಾಸೆ – ಚಿಕ್ಕಮಂಗಳೂರು ಸಂಪರ್ಕ ಸಂಪೂರ್ಣ ಕಡಿತವಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!