ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘ ಉಗಮ ಇದರ ಗೋದಾಮು ಕಟ್ಟಡ ಶಿಲಾನ್ಯಾಸ ಸಮಾರಂಭ ಶುಕ್ರವಾರ ನಡೆಯಿತು. ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್. ವಿ. ಶಿಲಾನ್ಯಾಸಗೈದರು. ಗೋದಾಮು ನಾಮಫಲಕವನ್ನು ಸಾಲಿಗ್ರಾಮ ಗುರುನರಸಿಂಹ ದೇವಳದ ಅಧ್ಯಕ್ಷ ಡಾ.ಕೆ ಎಸ್ ಕಾರಂತ್ ಅನಾವರಣಗೈದರು. ಧಾರ್ಮಿಕ ವಿಧಿವಿಧಾನ ವೇ.ಮೂ ಸುಬ್ರಹ್ಮಣ್ಯ ಅಡಿಗ ನೆರವೇರಿಸಿದರು. ಈ ಸಂದರ್ಭ ಸಂಘದ ಪಿಗ್ಮಿ ಎಜೆಂಟ್ರವರಿಗೆ ಸಾಂಕೇತಿಕ ಕಿಟ್ ವಿತರಿಸಲಾಯಿತು.
ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಜಿ ತಿಮ್ಮ ಪೂಜಾರಿ ಅಧ್ಯಕ್ಷತೆ ವಹಿಸಿದರು.

ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ, ಉಪಾಧ್ಯಕ್ಷ ರಾಜೀವ ದೇವಾಡಿಗ, ನಿರ್ದೇಶಕರಾದ ಡಾ.ಕೃಷ್ಣ ಕಾಂಚನ್, ರಂಜಿತ್ ಕುಮಾರ್, ಉದಯ್ ಕುಮಾರ್ ಶೆಟ್ಟಿ, ಪ್ರೇಮ ಪೂಜಾರಿ, ರಾಜೇಶ್ ಉಪಾಧ್ಯ, ರಶ್ಮಿತಾ, ಗೀತಾ ಶಂಭು ಪೂಜಾರಿ, ನಾಗರಾಜ್ ಹಂದೆ, ರವೀಂದ್ರ ಕಾಮತ್, ಮಹೇಶ್ ಶೆಟ್ಟಿ, ನಾಮನಿರ್ದೇಶಿತ ಸದಸ್ಯರಾದ ವಸಂತ ಶೆಟ್ಟಿ ಬನ್ನಾಡಿ, ಶ್ರೀಕಾಂತ್ ಶೆಣೈ,ಗುಲಾಬಿ ಬಂಗೇರ, ಸಹಾಯಕ ವ್ಯವಸ್ಥಾಪಕ ಕುಮಾರ್ ಕೆ. ಮತ್ತಿತರರು ಉಪಸ್ಥಿತರಿದ್ದರು. ಸಂಘದ ನಿರ್ದೇಶಕ ಟಿ ಮಂಜುನಾಥ ಗಿಳಿಯಾರ್ ಸ್ವಾಗತಿಸಿ ಪ್ರಸ್ತಾವನೆ ಸಲ್ಲಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಶೆಟ್ಟಿ ವರದಿ ವಾಚಿಸಿದರು.
ಕಾರ್ಯಕ್ರಮವನ್ನು ಸಂಘ ಸಿಬ್ಬಂದಿ ಶಾಲಿನಿ ಹಂದೆ ನಿರೂಪಿಸಿದರು. ಸಂಘದ ಸಹಾಯಕ ವ್ಯವಸ್ಥಾಪಕ ಶರತ್ ಕುಮಾರ್ ಶೆಟ್ಟಿ ವಂದಿಸಿದರು.
