Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಬಿಜೆಪಿ ಬಗ್ಗೆ ಸುಳ್ಳು ಹೇಳಿ ಕಾಂಗ್ರೆಸ್ ನಿಂದ ಜನರ ದಿಕ್ಕು ತಪ್ಪಿಸುವ ಪ್ರಯತ್ನ : ಕುಯಿಲಾಡಿ ಸುರೇಶ್ ನಾಯಕ್

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಭಾರತೀಯ ಜನತಾ ಪಾರ್ಟಿ ಉಡುಪಿಯ ಗ್ರಾಮಾಂತರ ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ ಬ್ರಹ್ಮಾವರ ಉನ್ನತಿ ಸಭಾ ಭವನದಲ್ಲಿ ಮಂಗಳವಾರ ಜರುಗಿತು.
ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮವನ್ನು ದೀಪ ಬೆಳಗಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿದರು.


ಬಳಿಕ ಅವರು ಮಾತನಾಡಿ, ನಮ್ಮ ಪಕ್ಷದ ಆಡಳಿತದ ಸರಕಾರ ಇಂದು ಸಾರ್ವಜನಿಕರಿಗೆ ಉಪಯುಕ್ತವಾಗುವ ಅನೇಕ ಕೆಲಸಗಳನ್ನು ಮಾಡುತ್ತಿದೆ. ಆದರೆ ವಿರೋಧಿ ಪಕ್ಷ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲಾ ಕಡೆಯಲ್ಲಿ ಅಪಪ್ರಚಾರವನ್ನು ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಂದ ತೊಡಗಿ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪರ ತನಕ ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದೆ. ಕಾರ್ಯಕರ್ತರು ನಮ್ಮ ಪಕ್ಷದ ಆಡಳಿತದ ಸರಕಾರ ಮಾಡಿದ ಉತ್ತಮ ಕೆಲಸವನ್ನು ಜನರಿಗೆ ತಿಳಿಸಬೇಕಾಗಿದೆ ಎಂದರು.


ಇದೇ ಸಂದರ್ಭದಲ್ಲಿ ಡೀಮ್ ಫಾರೆಸ್ಟ್ ಸಮಸ್ಯೆಗೆ ಪರಿಹಾರ ಕಲ್ಪಿಸುವ, ಬ್ರಹ್ಮಾವರವನ್ನು ಪುರಸಭೆ ಮಾಡುವ ಕುರಿತು ಮತ್ತು ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.


ಈ ವೇಳೆ ಶಾಸಕ ರಘುಪತಿ ಭಟ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯಕ್, ಪಕ್ಷದ ಪ್ರಮುಖರಾದ ಶ್ರೀಶ ನಾಯಕ್ , ಮನೋಹರ ಕಲ್ಮಾಡಿ ಬಿ.ಎನ್. ಶಂಕರ ಪೂಜಾರಿ, ಪ್ರತಾಪ್ ಹೆಗ್ಡೆ ಮಾರಾಳಿ ,ಅಶೋಕ್ ಹೇರೂರು ಇನ್ನಿತರರು ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!