ಹಿರಿಯಡಕ : ಪೆರ್ಣಂಕಿಲದ ಗುಂಡುಪಾದೆಯಲ್ಲಿ ಅರಣ್ಯ ಇಲಾಖೆ ಇಟ್ಟ ಬೋನಿಗೆ ಚಿರತೆ ಬಿದ್ದಿದೆ. ಈ ಭಾಗದಲ್ಲಿ ಚಿರತೆ ಸಂಚಾರದ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಶೋಕ್ ನಾಯಕ್ ಎಂಬವರ ತೋಟದಲ್ಲಿ ಬೋನನ್ನು ಅರಣ್ಯ ಇಲಾಖೆ ಇರಿಸಿತ್ತು. ಕಾರ್ಯಾಚರಣೆ ಯಶಸ್ವಿಯಾಗಿದ್ದು ಚಿರತೆಯನ್ನು ಶುಕ್ರವಾರ ಅಭಯಾರಣ್ಯಕ್ಕೆ ಬಿಡಲಾಗಿದೆ.