Connect with us

Hi, what are you looking for?

Diksoochi News

ಕರಾವಳಿ

ಜೆಸಿಐ ಬಂಟ್ವಾಳದ ವತಿಯಿಂದ ಕಂಡದ ಪರ್ಬ ಹಾಗೂ ಸನ್ಮಾನ ಕಾರ್ಯಕ್ರಮ

0

ಬಂಟ್ವಾಳ : ಜೆಸಿಐ ಬಂಟ್ವಾಳದ ವತಿಯಿಂದ ಕಂಡದ ಪರ್ಬ ಹಾಗೂ ಸನ್ಮಾನ ಕಾರ್ಯಕ್ರಮ ಅಮ್ಚಾಡಿ ಏರ್ಯ ಬೀಡು ಬಾಲಕೃಷ್ಣ ಹೆಗ್ಡೆ ಅವರ ಗದ್ದೆಯಲ್ಲಿ ನಡೆಯಿತು. ಈ ಸಂದರ್ಭ ಪ್ರಗತಿ ಪರ ಕೃಷಿಕ ಉಮಾನಾಥ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್.ಮೂಲ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್ ಪೂಂಜ, ಜೆಸಿಐ ವಲಯ 15ರ ವಲಯಾಧ್ಯಕ್ಷೆ ಸೌಜನ್ಯ ಹೆಗ್ಡೆ, ವಲಯಾಧಿಕಾರಿ ಯತೀಶ್ ಕರ್ಕೇರಾ, ಜೆಸಿಐ ಬಂಟ್ವಾಳದ ಕಾರ್ಯದರ್ಶಿ ರೋಷನ್ ರೈ, ಸದಸ್ಯ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಕೃಷಿಕ ಚೆನ್ನಪ್ಪ ಅವರನ್ನು ಈ ವೇಳೆ ಅಭಿನಂದಿಸಲಾಯಿತು. ವಲಯ ಉಪಾಧ್ಯಕ್ಷ ಶರತ್ ಕುಮಾರ್, ಸ್ಥಾಪಕಾಧ್ಯಕ್ಷ ನಾಗೇಶ್ ಬಾಳೆಹಿತ್ಲು, ನಿಕಟಪೂರ್ವಾಧ್ಯಕ್ಷ ಸದಾನಂದ ಬಂಗೇರ, ಜೇಸಿರೆಟ್ ಅಧ್ಯಕ್ಷೆ ವಿದ್ಯಾ ಉಮೇಶ್, ಕಾರ್ಯದರ್ಶಿ ರೋಷನ್ ರೈ ವಂದಿಸಿದರು. ಲೋಕೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಗದ್ದೆಯಲ್ಲಿ ಕ್ರೀಡಾ ಚಟುವಟಿಕೆಗಳು ನಡೆದವು. ಬಳಿಕ ಗದ್ದೆ ಉಳುಮೆ ಮಾಡಿ ನಾಟಿ ಮಾಡಲಾಯಿತು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!