Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ನದಿಗೆ ಬಿದ್ದು ಎರಡು ವರ್ಷದ ಮಗು ಸಾವು

0

ಕುಂದಾಪುರ : ಮಗುವೊಂದು ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉಪ್ಪುಂದದಲ್ಲಿ ನಡೆದಿದೆ. ಸರ್ವದ(2ವ.) ಮೃತ ಮಗು. ಸೋಮವಾರ ಮಧ್ಯಾಹ್ನದ ವೇಳೆಯಲ್ಲಿ ತಂದೆ ಕೋಣೆಯಲ್ಲಿ ಮಗುವನ್ನು ಮಲಗಿಸಿ ಹೊರಗೆ ಹೋಗಿದ್ದು, ತಾಯಿ ಬೇರೆ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಮಗು ಹೊರಗೆ ಹೋಗಿದ್ದು, ಮನೆಯ ಸಮೀಪದ ಎಡಮಾವಿನ ಹೊಳೆ ದಡದ ಮೇಲೆ ನಡೆದುಕೊಂಡು ಹೋಗಿದೆ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದೆ ಎನ್ನಲಾಗಿದೆ. ಉಪ್ಪುಂದ – ಕರ್ಕಿಕಳಿ ಬ್ರೇಕ್ ವಾಟರ್ ಸಮೀಪ ಮಗುವಿನ ಮೃತದೇಹ ಮತ್ತೆಯಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!