ಎರಡು ಬಾರಿ ಕೋವಿಡ್, ಪ್ರವಾಹಗಳು ನಿರ್ವಹಿಸಿದ್ದಾರೆ. ಅತ್ಯಂತ ಕಷ್ಟ ಪರಿಸ್ಥಿತಿಯಲ್ಲಿ ರಾಜ್ಯ ಬೊಕ್ಕಸಕ್ಕೆ ಕಡಿಮೆ ಆಗದಂತೆ ಯಡಿಯೂರಪ್ಪ ಕೆಲಸ ಮಾಡಿದ್ದಾರೆ. ಅವರ ಮಾರ್ಗದಲ್ಲೇ ಹೆಜ್ಜೆ ಇಡುತ್ತೇನೆ. ಪ್ರತಿಯೊಂದು ವಿಚಾರದಲ್ಲಿಯೂ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿಯೇ ಸಾಗುತ್ತೇನೆ. ಬಡವರ,ದೀನ ದಲಿತರ, ಮಹಿಳೆಯರ,ಯುವಕರ ಕಲ್ಯಾಣಕ್ಕಾಗಿ ಶ್ರಮಿಸುತ್ತೇನೆ ಎಂದು ನಿಯೋಜಿತ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ನಾಳೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ. ನಾನು ಮಾತ್ರ ಪ್ರಮಾಣ ವಚನ ಸ್ವೀಕರಿಸುತ್ತಿದ್ದೇನೆ. ಪ್ರಧಾನಿ ಮೋದಿ, ಅಮಿತ್ ಷಾ, ನಳಿನ್ ಕುಮಾರ್ ಕಟೀಲ್, ಅರುಣ್ ಸಿಂಗ್ ರಿಗೆ ಧನ್ಯವಾದ ಎಂದರು.
Advertisement. Scroll to continue reading.