Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ನೀಲಾವರ ಗೋಶಾಲೆಯಲ್ಲಿ ಗೋವಿಗಾಗಿ ಮೇವು ಕಾರ್ಯಕ್ರಮಕ್ಕೆ ಚಾಲನೆ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಕಳೆದ ವರ್ಷ ಆರಂಭ ಗೊಂಡ ಗೋವಿಗಾಗಿ ಮೇವು ಅಭಿಯಾನಕ್ಕೆ ಮಾರ್ಚ್‌ ತನಕ 300 ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಿ ಅಭಿಯಾನ ಚಿಕ್ಕಮಗಳೂರು ಜಿಲ್ಲೆಗೂ ಹಬ್ಬಿ ಯಶಸ್ವಿಯಾಗಿತ್ತು. ಈ ವರ್ಷದ ಗೋವಿಗಾಗಿ ಮೇವು ಕಾರ್ಯಕ್ರಮಕ್ಕೆ ನೀಲಾವರ ಗೋಶಾಲೆಯಲ್ಲಿ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಗೋವಿಗೆ ಮೇವನ್ನು ನೀಡುವುದರ ಮೂಲಕ ಅಧಿಕೃತ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಗೋವಿಗಾಗಿ ಮೇವು ಅಭಿಯಾನದ ತಂಡ ಜಿಲ್ಲೆಯಲ್ಲೇ ಪಾದರಸದಂತೆ ಕೆಲಸ ಮಾಡಿ ಅನೇಕ ಸಂಘಸಂಸ್ಥೆಗಳಿಗೆ ಪ್ರೇರೇಪಿಸುತ್ತಿರುವುದು ನೈಜ ಹಿಂದುತ್ವದ ಸಂಕೇತ. ಅಭಿಯಾನ ರಾಜ್ಯ ವ್ಯಾಪ್ತಿ ಹರಡಲಿ ಎಂದರು.

ಪ್ರಾಸ್ತಾವಿಕ ಮಾತನಾಡಿದ ಗೋವಿಗಾಗಿ ಮೇವು ಅಭಿಯಾನದ ಸ್ಥಾಪಕ ಸಂಚಾಲಕ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ, ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತೇವೆ. ಅಭಿಯಾನದಲ್ಲಿ ಕೈ ಜೋಡಿಸಿ ಎಂದರು. ಬಂಟರ ಸಂಘ ಬೆಂಗಳೂರು ಕೋಶಾಧಿಕಾರಿ ದೀಪಕ್ ಶೆಟ್ಟಿ ಬಾರಕೂರು, ನೀಲಾವರ ಗೋಶಾಲೆಯ ನರಸಿಂಹ ಭಟ್, ಅರೂರು ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ರಾಜೀವ ಕುಲಾಲ್, ಸಮಾಜ ಸೇವಕ ರಾಘವೇಂದ್ರ ಪ್ರಭು ಕರ್ವಾಲ್, ಕೆಂಜೂರು ಲಯನ್ಸ್ ಕ್ಲಬ್ ಅಧ್ಯಕ್ಷೆ ಜಯಶ್ರೀ ಶೆಟ್ಟಿ, ವಿಕಾಸ್ ಶೆಟ್ಟಿ ಉಡುಪಿ, ಗೋವಿಗಾಗಿ ಮೇವು ಕೋಟ ವಲಯಾಧ್ಯಕ್ಷ ಪ್ರದೀಪ್ ಪೂಜಾರಿ, ಮಹಿಳಾ ಅಧ್ಯಕ್ಷೆ ವಿದ್ಯಾ ಸಾಲ್ಯಾನ್, ಜಿಲ್ಲಾ ಸಮಿತಿಯ ನಾಗೇಂದ್ರ ಪುತ್ರನ್, ಪ್ರದೀಪ್ ಪಡುಕೆರೆ, ಶಿವರಾಮ್ ಬಂಗೇರ, ಕೋಟ, ಸ್ಪಂದನ ಯುವಕ ಮಂಡಲ ಆರೂರು, ಮಹಾಲಿಂಗೇಶ್ವರ ಭಜನಾ ಮಂಡಳಿ ಕೂರಾಡಿ, ಪಾಂಚಜನ್ಯ ಯುವಕ ಮಂಡಲ ಕೋಟ, ನೀತಾ ಪ್ರಭು ಗೆಳೆಯರ ಬಳಗ ಹಿರಿಯಡ್ಕ, ಗೋವಿಗಾಗಿ ಮೇವು ಕೋಟ – ಸಾಲಿಗ್ರಾಮ ವಲಯ ತಂಡ – ಸಂಘಟನೆಗಳು ಭಾಗವಹಿಸಿದ್ದವು. ಶಿಕ್ಷಕ ಸಂತೋಷ್ ಶೆಟ್ಟಿ ಎಳ್ಳಂಪಳ್ಳಿ ಕಾರ್ಯಕ್ರಮ ನಿರ್ವಹಿಸಿದರು

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!